Skip to main content
ಬೇಂದ್ರೆ ಅಂದ್ರೆ
ಮಳೆ
ಬರ
ಬೇಕಾದರೆ ಏನು ಬೇಕೋ
ಅವೆಲ್ಲವೂ ಅಲ್ಲಿತ್ತು
ಗಾಳಿ ಸುಯ್ಯುತಲಿತ್ತು
ಮೋಡ ಕವಿದಿತ್ತು
ಆದರೂ ಮಳೆಯಾಗಲಿಲ್ಲ
ಯಾಕೆ ಮತ್ತೂ?

ಅದಾವುದೋ ಮಾಂತ್ರಿಕ ಸ್ಪರ್ಶ
ಇಲ್ಲವಾದಲ್ಲಿ ಇಲ್ಲವೇ?
ಇಲ್ಲ ವರ್ಷ!

ಇಲ್ಲವಾದರೂ ಹುಟ್ಟು
ಹೃದಯ ಮಿದುಳು ಪುಪ್ಪುಸ
ಉದರ ಯಕೃತ್ತು
ಮತ್ತಿತರವುಗಳೆಲ್ಲವನೂ ತೊಗಲಿನೊಳಗಿಟ್ಟು
ಜೀವತಳೆಯಲು ಕಾದ ಹಾಗೆ

ಆ ಇನ್ಯಾವುದೋ ಇದೆಯಲ್ಲ
ಅದನದರೊಳಗೆ ತರುವುದು ಹೇಗೆ?
ಅದು ಯಾರ ಕೈಯಲ್ಲಿ ಇದೆ
ಇದೆಯಾದರೆ ಅವರ ಅವನ ಅವಳ
ಅಂತರಾಳದಲ್ಲಿ ಏನಿದೆ?

ಸೇರಿಸಿದರೆ ಪೇರಿಸಿದರೆ ಶಬ್ದಗಳ ಬರಿ ಸಂತೆ
ಆಗದದು ಆ ಗಾರುಡಿಗ ಬರೆದಂತೆ
ಅಂದ ಗಂಧದ ನಂಟಿರದ ಹೂ
ಬರಿ ಕಾಗದದ ಹಾಗಾದಂತೆ

ಬೇಯುವುದು ಸುಲಭ
ಬೆಂದುದರಲ್ಲಿ ತರಲು ಒಂದು ಹದ
ಹೊರಡಿಸಲು ನಾದದ ನವನೀತ
 ಸದಾ ಕಾಯ ಬೇಕು
ಕಾಯದೊಳಗಾ. . . ಮಾಯೆ ಜೀವ ಬೇಕು

ಬೇಂದ್ರೆಯಾಗುವುದಿಲ್ಲ ಬೆಂದವರೆಲ್ಲ
ಕವಿತೆಯಾಗುವುದಿಲ್ಲ ಕೊರಗಿದ್ದೆಲ್ಲ
ಪಾತರಗಿತ್ತಿ ಮೊದಲಗಿತ್ತಿ ಆಗುವ ಪವಾಡ
ಅದು ಧಾರವಾಡದ ಪೇಡ ಮತ್ತದರ ಕೈವಾಡ

ಅದರ ಸಿಹಿ ಸವಿಯುವ ಭಾಗ್ಯ
ನಮಗೆ ದಕ್ಕಿದೆ
ಅದರ ಪಾಕ ಅವರ ಹಕ್ಕು
ನಮ್ಮದನು ನಾವು ಹುಡುಕಬೇಕಿದೆ
(31 ಜನವರಿ, 2020ರ  ‘ಅವಧಿ’ಯಲ್ಲಿ ಪೋಸ್ಟ್/ಪ್ರಕಟ ಆಗಿತ್ತು)
 

Comments

Popular posts from this blog

  ಅರ್ಧ ಶತಕ ಬಾರಿಸಿದ, ವಿಶ್ವವ್ಯಾಪಿ ಘನಾಕೃತಿಯ ವೃತ್ತಾಂತ -ಆಗಸ್ಟ್‌ 2025ರ ತುಷಾರ ದಲ್ಲಿ ಪ್ರಕಟವಾಗಿತ್ತು     ನಿಂತಲ್ಲಿ, ಕೂತಲ್ಲಿ, ಎಲ್ಲೆಂದರಲ್ಲಿ ಕೈನಲ್ಲಿ ಮೊಬೈಲ್‌ ಹಿಡಿದುಕೊಂಡಿರುವ ಇಂದಿನ ಪೀಳಿಗೆಗೆ, ‘ಸರಿಸುಮಾರು ಐವತ್ತು ವರ್ಷಗಳ ಹಿಂದೆ ಕೆಲವರ ಎರಡೂ ಕೈಗಳಲ್ಲಿ ವಕ್ಕರಿಸಿದ್ದ ಒಂದು ಜಡ ಘನಾಕೃತಿ, ಇದೇ ರೀತಿ ಅವರ ಸಮಯವನ್ನು, ಸಂಯಮವನ್ನು ಕಸಿದುಕೊಳ್ಳುತ್ತಿತ್ತಾದರೂ ಅವರ ಮಿದುಳಿಗೆ ಕಸರತ್ತು ನೀಡುತ್ತಿತ್ತು ’- ಎಂದರೆ ಅಚ್ಚರಿಯಾಗಬಹುದು! ಆ ಕಾಲದಲ್ಲಿ ಅಂಥದೊಂದು ಗೀಳಿಗೆ ಕಾರಣವಾದ ಆ ಬಣ್ಣ ಬಣ್ಣದ ಕ್ಯೂಬ್‌ , ಹಂಗೇರಿ ದೇಶದ ಏರ್ನೋ ರೂಬಿಕ್‌   ( Ernő Rubik   ) ಅನ್ನುವ ಶಿಲ್ಪಿ ಹಾಗೂ   ವಾಸ್ತುಶಿಲ್ಪದ ಪ್ರೊಫೆಸರ್‌ ಒಬ್ಬನ ಕಲ್ಪನೆಯ ಕೂಸು. ಮ್ಯಾಜಿಕ್‌ ಕ್ಯೂಬ್‌, ಸ್ಪೀಡ್‌ ಕ್ಯೂಬ್‌, ಪಜ್ಲ್‌ ಕ್ಯೂಬ್,‌ ಬರೀ ಕ್ಯೂಬ್ ಹೀಗೆ ಹಲವು ಹೆಸರುಗಳುಳ್ಳ ಈ ಕೌತುಕ, ಅದರ ಕರ್ತೃವಿನ ಕಲ್ಪನೆಯನ್ನೂ ಮೀರಿ ಜನಪ್ರಿಯವಾದದ್ದು, ಈ ಶತಮಾನದ ವಿಸ್ಮಯಗಳಲ್ಲಿ ಒಂದು. ಅಷ್ಟಕ್ಕೂ ಏರ್ನೋ ರೂಬಿಕ್‌   ಆವಿಷ್ಕರಿಸಿದ್ದು ಒಂದು ಒಗಟಿನಾಟಿಕೆಯನ್ನು ಅಲ್ಲವೇ ಅಲ್ಲ! ತನ್ನವಿದ್ಯಾರ್ಥಿಗಳಿಗೆ, ಮೂರು ಆಯಾಮಗಳುಳ್ಳ ಆಕೃತಿಗಳ ಕುರಿತು ವಿವರಣೆ ನೀಡಲು ಅವನಿಗೆ ಒಂದು ಸಲಕರಣೆ ಬೇಕಿತ್ತು. ಅವನು ಈ ಕ್ಯೂಬ್ ನ್ನು ಆವಿಷ್ಕರಿಸಲು   ಕಾರಣ ಇದುವೇ ಎಂಬ ಮಾತು ಜನಜನಿತವಾಗಿದೆ. ಆದರೆ ಅದು ಹಾ...
  ಛಾಯಾಚಿತ್ರ ಒಂದು, ಸಂಚಲನಗಳು ಹತ್ತು ಹಲವು   ಮೊಬೈಲ್‌, ಸಾಮಾಜಿಕ ಜಾಲತಾಣ ಬಿಡಿ; ಇಂಟರ್ನೆಟ್ ಕೂಡಾ ಅಂಬೆಗಾಲಿಡುತ್ತಿದ್ದ ತೊಂಭತ್ತನೇ ದಶಕದ ಕಾಲವದು. ಆದಾಗ್ಯೂ   ಅದೊಂದು ಛಾಯಾಚಿತ್ರ     ಅಂದು ಸೃಷ್ಟಿಸಿದ ಸಂಚಲನ, ಎಬ್ಬಿಸಿದ ಆಕ್ರೋಶ ಮತ್ತು ತಲ್ಲಣಗಳ ತೀವ್ರತೆ- ನಾವು ಇಂದು ವೈರಲ್‌ ಎಂದು ಏನನ್ನು ಕರೆಯುತ್ತೇವೆಯೋ- ಅದಕ್ಕೆ ಸಮಾನ.   ಸುಡುವ ಕ್ಷಾಮಕ್ಕೆ ತುತ್ತಾದ ಸುಡಾನ್‌   ಅಂತಃಕಲಹ ಅನ್ನುವುದು ಆಫ್ರಿಕಾ ಖಂಡದ ದೇಶಗಳ ಹಣೆಬರಹ. ಅಂದಮೇಲೆ, ಸುಡಾನ್‌ ನಂತಹಾ ಆಫ್ರಿಕನ್ ದೇಶವನ್ನು ಅದು ಕಾಡದೆ ಇರುತ್ತದೆಯೇ? ಆದರೆ   ಒಳಜಗಳ ಫಲದಿಂದ ಭೀಕರ ಕ್ಷಾಮಕ್ಕೆ ತುತ್ತಾದದ್ದು ಸುಡಾನ್‌ನ ಘೋರ ದುರಂತ. ಆಫ್ರಿಕಾದ ಈಶಾನ್ಯದಲ್ಲಿರುವ ಸುಡಾನ್ ಗೆ   ಸಾಂಸ್ಕೃತಿಕವಾಗಿ ಶತಶತಮಾನಗಳ ಸಮೃದ್ಧ ಪರಂಪರೆಯಿದೆ. ಇದು ಕತ್ತಲೆಯ ಖಂಡದ ಬೃಹತ್‌ ರಾಷ್ಟ್ರಗಳಲ್ಲಿ ಒಂದು. ಹೆಚ್ಚುಕಮ್ಮಿ ಕೃಷಿಯೇ ಆರ್ಥಿಕತೆಯ ಮೂಲವಾಗಿರುವ ಈ ದೇಶ ಬಂಜರು, ಅರೆ ಬಂಜರು ಭೂಮಿ ಮತ್ತು ಹುಲ್ಲುಗಾವಲುಗಳಿಂದ ತುಂಬಿದ್ದು, ತೈಲ ಮತ್ತು ಖನಿಜಗಳಿಗೆ ಇಲ್ಲಿ ಕೊರತೆಯೇನೂ ಇಲ್ಲ.   ಬ್ರಿಟನ್‌ ಹಾಗೂ ಈಜಿಪ್ಟ್‌ ದೇಶಗಳು ಜಂಟಿಯಾಗಿ ಆಳುತ್ತಿದ್ದ ಈ ದೇಶ 1956 ರಲ್ಲಿ ಸ್ವತಂತ್ರವಾಯಿತು. ಆ   ದರೆ ವಿವಿಧ ಸಂಸ್ಕೃತಿ, ಭಾಷೆ ಹಾಗೂ ಜನಾಂಗಗಳ ತಾಣವಾಗಿರುವ ಸುಡಾನ್‌ನ ಪಾಲಿಗೆ ರಾಜಕೀಯ ಅಸ್ಥಿರತೆ, ಸೇನಾಡಳಿತ ಹ...
    ಒಂದು ಅಜ್ಜಿ ಕಥೆ “ ಬಡಗಿ ಬೇಸಾಯ ಕರ್ಮಿಗರೇನು ಯೋಗಿಗಳೊ ? ಮುಡುಪವರ ಮನಸೆಲ್ಲ ಕೈಯ ದುಡಿತಕ್ಕೆ ಬಿಡುವಿರದು ಬಣಗು ಚಿಂತೆಗೆ , ಬುತ್ತಿ ಹಂಗಿರದು ಕಡಿದಲ್ಲವರ್ಗೆ ಬಾಳ್ ” - ಮಂಕು ತಿಮ್ಮ     ಬಸವನ ಗುಡಿಯ ‘ ಮಂಕು ತಿಮ್ಮ ’ ನ ( ಡಿವಿಜಿ ) ರಸ್ತೆಯ ಹೋಟೆಲ್ ಒಂದರಿಂದ ತಿಂಡಿ ಕಟ್ಟಿಸಿಕೊಂಡು ರಸ್ತೆಗಿಳಿದಾಗ ಸಮಯ ರಾತ್ರಿ ಸುಮಾರು ಎಂಟೂವರೆ ಗಂಟೆ . ಕೆಲವು ಅಂಗಡಿಗಳು ಕದವಿಕ್ಕುವ ಸಮಯವದು . ಸಂಬಳದಾರರು , ದಿನಕೂಲಿಗೆ ದುಡಿಯುವವರು , ‘ ಟೈಮ್ ಪಾಸ್ ಮಾಡುವುದು ಹೇಗೆ ?’ ಎಂಬ ಗುರುತರ ಸಮಸ್ಯೆಯಲ್ಲಿ ಸಿಲುಕಿದವರು , ಎಂತೆಂತವರು ರಸ್ತೆಗೆ ಇಳಿದಿದ್ದರೂ ತಮ್ಮತಮ್ಮ ಮನೆಗ ಳ ತ್ತ À ಮುಖಮಾಡುವ ಹೊತ್ತು . ‘ ತಡ ಮಾಡಬಾರದು ’ ಎಂದು ಲಗುಬಗೆಯಿಂದ ಹೊರಟ ನನ್ನನ್ನು , ಮೊದಲೇ ನನ್ನ ಕಣ್ಣಿಗೆ ಬಿದ್ದಿತ್ತಾದರೂ ನಾನು ಕಡೆಗಣಿಸಿದ , ಆದರೆ ಸುಪ್ತಮನದಲ್ಲಿ ಉಳಿದುಕೊಂಡ ಒಂದು ಸ್ತಬ್ಧ ಚಿತ್ರ , ಪ್ರಜ್ಞೆಯನ್ನು ಪ್ರವೇಶಿಸಿ ಕಾಡಲಾರಂಭಿಸಿತು . ಹೆಜ್ಜೆಗಳು ನಿಧಾನವಾದವು . ಆ ಹೋಟೆಲ್ ‍ ನ ಹೊರಗಡೆ ರಸ್ತೆಯ ಬದಿಯಲ್ಲಿ ಒಂದು ಜೀವ , ಸಮಯದ ಗೊಡವೆಯೇ ಇಲ್ಲದೆ ಹೂವ ಮಾರಾಟ ಮಾಡುತ್ತಿತ್ತು . ಆಕೆ ಸುಮಾರು ಎಂಭತ್ತರ ಆಸುಪಾಸಿನ ತರುಣಿ . ಕೂಲಿಂಗ್ ಗ್ಲಾಸ್ ಬೇರೆ ಧರಿಸಿದ್ದಾಳೆ . ಆ ಹೊತ್ತಲ್ಲಿ , ಇಳಿವಯಸ್ಸಿನಲ...